ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು ಆರೋಗ್ಯ ಸ್ಥಿತಿ ವರದಿ ಆಧರಿಸಿ ಆಪರೇಷನ್ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದು, ದರ್ಶನ್ ಮತ್ತು ಕುಟುಂಬದವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ವೈದ್ಯಕೀಯ ವರದಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ಈಗಾಗಲೇ ದರ್ಶನ್ ಗೆ ಅನೇಕ ರೀತಿಯ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ, ಚಿಕಿತ್ಸೆ ವರದಿಯನ್ನು ವೈದ್ಯರು ಸಿದ್ಧಪಡಿಸಲಿದ್ದು, ವರದಿಯನ್ನು ದರ್ಶನ್ ಪರ ವಕೀಲರು ಕೋರ್ಟ್ ಗೆ ಸಲ್ಲಿಸಲಿದ್ದಾರೆ. ಮಂಗಳವಾರ ಕೋರ್ಟ್ ಗೆ ವೈದ್ಯಕೀಯ ವರದಿ ಸಲ್ಲಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read