BIG NEWS: ನಟ ದರ್ಶನ್ ಬೇಲ್ ರದ್ದಾಗುತ್ತಾ…? ಸುಪ್ರೀಂ ಕೋರ್ಟ್ ನಲ್ಲಿಂದು ಮೇಲ್ಮನವಿ ವಿಚಾರಣೆ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟಿನಲ್ಲಿ ಜಾಮೀನು ರದ್ದು ಅರ್ಜಿಯ ಮೇಲ್ಮನವಿ ವಿಚಾರಣೆ ನಡೆಸಲಾಗುವುದು.

ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಹೈಕೋರ್ಟ್ ನಿಂದ 7 ಮಂದಿ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದು, ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಜನವರಿ 6ರಂದು ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಲಾಗಿದ್ದು, ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗುತ್ತದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮಹಾದೇವನ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ದರ್ಶನ್, ಪವಿತ್ರಾ ಗೌಡ, ನಾಗರಾಜು, ಅನುಕುಮಾರ್, ಲಕ್ಷ್ಮಣ್, ಜಗದೀಶ್, ಪ್ರದೋಶ್ ಅವರ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದ್ದು, ಕುತೂಹಲ ಮೂಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read