ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ ಮೂರು ಕಿ.ಮೀ. ಸರತಿ ಸಾಲು

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

ಶನಿವಾರ, ಭಾನುವಾರದ ರಜೆ, ಸೋಮವಾರ ಬಕ್ರಿದ್ ಹಬ್ಬದ ಕಾರಣ ತಿರುಮಲದ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ಸಂಖ್ಯೆ ಭಾರಿ ಹೆಚ್ಚಾಗಿದೆ. ಶನಿವಾರ, ಭಾನುವಾರ ಹೆಚ್ಚಿನ ಜನದಟ್ಟಣೆ ಕಂಡುಬಂದಿದ್ದು, ದೇವರ ದರ್ಶನಕ್ಕೆ ಭಕ್ತರು ಸುಮಾರು ಮೂರು ಕಿಲೋ ಮೀಟರ್ ವರೆಗೂ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.

ಚುನಾವಣೆ ಮುಕ್ತಾಯವಾಗಿದ್ದು, ಅನೇಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ. ವಾರಾಂತ್ಯ ರಜೆ ಮತ್ತು ಬಕ್ರಿದ್ ಹಬ್ಬದ ರಜೆ ಇರುವುದರಿಂದ ಭಾರಿ ಸಂಖ್ಯೆಯ ಭಕ್ತರು ತಿರುಮಲಕ್ಕೆ ಆಗಮಿಸಿದ್ದಾರೆ. ಸೋಮವಾರವೂ ಹೆ್ಇನ ಜನಸಂದಣಿ ಕಂಡುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read