ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಜಸ್ಥಾನದ ಸಿರೊಹಿ ಜಿಲ್ಲೆಯ ಅಬುರೋಡ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಸಬರಮತಿ-ದೌಲತ್ ಪುರ ಎಕ್ಸ್ ಪ್ರೆಸ್ ರೈಲು ಅಬು ರಸ್ತೆಯ ರೈಲು ನಿಲ್ದಾಣ ಫ್ಲಾಟ್ ಫಾರ್ಮ್ ನಲ್ಲಿ ನಿಂತಿದ್ದಾಗ ರೈಲಿನ ಕೋಚ್ ಸಂಖ್ಯೆ ಎ-1ರ ಎಸಿ ಪ್ಯಾನೆಲ್ ನಲ್ಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಪ್ಯಾನಲ್ ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಅಟೆಂಡರ್ ಹಾಗೂ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರು ಗಾಬರಿಯಿಂದ ರೈಲಿನಿಂದ ಇಳಿದಿದ್ದಾರೆ. ಈ ವೇಳೆ ಕೆಲ ಕಾಲ ಗೊಂದಲ, ಆತಂಕದ ವಾತಾವರನ ನಿರ್ಮಾಣವಾಗಿತ್ತು.

ತಕ್ಷಣ ರೈಲು ಸಿಬ್ಬಂದಿಗಳು, ಅಗ್ನಿಶಾಮಕ ಸಿಬ್ಬಂದಿಗಳು ರೈಲಿನಲ್ಲಿದ್ದ ಅಗ್ನಿಶಾಮಕ ವ್ಯವಸ್ಥೆ ಬಳಿಸಿಕೊಂಡು ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read