BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ದಾವಣಗೆರೆ: ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಕೊಯೊಡ್ಡಿದ್ದ ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದೇವರಹಳ್ಳಿ ಗ್ರಾಮ ಪಂಚಾಯತ್ ಹಂಗಾಮಿ ಬಿಲ್ ಕಲೆಕ್ಟರ್ ಲೋಕೇಶ್ ಹಾಗೂ ನಿರುಗಂಟೆ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು.

ಇಂದಿರಾ ಗ್ರಾಮೀಣ ವಸತಿ ಯೋಜನೆಯಡಿ 2016ರಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read