ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು ಸಂಗ್ರಹಿಸಿದ ಆರೋಪ ಹಿನ್ನೆಲೆಯಲ್ಲಿ ಗೋದಾಮಿನ ಮೇಲೆ ದಾಳಿ ನಡೆಸಲಾಗಿತ್ತು. 16.65 ಲಕ್ಷ ರೂಪಾಯಿ ಮೌಲ್ಯದ ಗೃಹಬಳಕೆ ವಸ್ತುಗಳನ್ನು ಜಪ್ತಿ ಮಾಡಲಾಗಿತ್ತು. ಕಿಟ್ ಗಳ ಮೇಲೆ ಶಿವಶಂಕರಪ್ಪ ಮತ್ತು ಅವರ ಪುತ್ರ ಮಲ್ಲಿಕಾರ್ಜುನ್ ಅವರ ಫೋಟೋ ಇತ್ತು.

ಚುನಾವಣಾ ಅಧಿಕಾರಿ ಬಿ.ಎಂ. ಮಾನೆ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಶಾಮನೂರು ಶಿವಶಂಕರಪ್ಪ ಆಪ್ತರಾಗಿರುವ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಾಲತೇಶ್ ಜಾಧವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read