ಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದಿದ್ದಾರೆ.

ಕೆಲವು ದಿನಗಳಿಂದ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ ಮೂಡಿಸಿತ್ತು. ಇತ್ತೀಚೆಗೆ ನಾಲ್ವರ ಮೇಲೆ ದಾಳಿ ನಡೆಸಿದ್ದು, ಜನರಲ್ಲಿ ಆತಂಕ ಹೆಚ್ಚಾಗಿತ್ತು. ಮೆಕ್ಕೆಜೋಳದ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದನ್ನು ಗ್ರಾಮಸ್ಥರು ನೋಡಿದ್ದಾರೆ. ಕೂಡಲೇ ಕೆಲವರು ದೊಣ್ಣೆ ಕಲ್ಲುಗಳಿಂದ ಹೊಡೆದು ಚಿರತೆ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಹೊನ್ನಾಳಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಚಿರತೆಯನ್ನು ವಶಕ್ಕೆ ಪಡೆದುಕೊಂಡಿದ್ದು, ನಿತ್ರಾಣಗೊಂಡಿದ್ದ ಚಿರತೆಗೆ ಉಪಚರಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read