ಬೆಂಗಳೂರು : ಉಚ್ಛಾಟನೆಗೆ ಹೆದರಿ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ ಎಂದು ಜೆಡಿಎಸ್ ಲೇವಡಿ ಮಾಡಿದೆ. ಸದನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದು, ಕಾಂಗ್ರೆಸ್ ಎಂಎಲ್ ಸಿ ಸುರ್ಜೆವಾಲಾ ಅವರು ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದರು. ಇದೀಗ ಎಕ್ಸ್ ಖಾತೆಯಲ್ಲಿ ಜೆಡಿಎಸ್ ಲೇವಡಿ ಮಾಡಿದೆ.
ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ. ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. @INCIndiaಹೈಕಮಾಂಡ್ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಜೆಡಿಎಸ್ ಲೇವಡಿ ಮಾಡಿದೆ.
ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ @DKShivakumar
— Janata Dal Secular (@JanataDal_S) August 26, 2025
ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ.
ವಿಧಾನಸಭೆಯಲ್ಲಿ #RSS ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ನಾಯಕ ಸಮುದಾಯದ ಸಚಿವರನ್ನು… pic.twitter.com/7DjnshcWc4