‘ಡಿಸಿಎಂ ಡಿಕೆಶಿ’ ಕೊತ್ವಾಲ್ ರಾಮಚಂದ್ರನ ಶಿಷ್ಯ , ಎಲ್ಲರಿಗೂ ಟ್ರೀಟ್ಮೆಂಟ್ ಕೊಡ್ತಾರೆ : ಸಿಟಿ ರವಿ ತಿರುಗೇಟು

ಚಿಕ್ಕಮಗಳೂರು : ಡಿಸಿಎಂ ಡಿಕೆಶಿ ಕೊತ್ವಾಲ್ ರಾಮಚಂದ್ರನ ಶಿಷ್ಯ , ಆತ ಎಲ್ಲರಿಗೂ ಟ್ರೀಟ್ಮೆಂಟ್ ಕೊಡ್ತಾರೆ ಎಂದು ಸಿಟಿ ರವಿ ತಿರುಗೇಟು ನೀಡಿದ್ದಾರೆ.

ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಟಿ ರವಿ ಇಂದು ಸುದ್ದಿಗಾರರ ಜೊತೆ ಮಾತನಾಡಿದರು. ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಅವರು ದೇಶದ ಶ್ರೀಮಂತ. ನಾನು ಸೋತಿದ್ದೀನಿ, ಅವರು ಗೆದ್ದಿದ್ದಾರೆ. ಅಧಿಕಾರದ ಮದ ಅವರನ್ನು ಹಾಗೆ ಮಾಡಿಸುತ್ತದೆ. ಅವರಿಗೆ ಎಲ್ಲರಿಗೂ ಟ್ರೀಟ್ ಮೆಂಟ್ ಕೊಡುವ ಹುಮ್ಮಸ್ಸು ಬಂದಿರಬಹುದು ಎಂದಿದ್ದಾರೆ.

ನಾನು ಸೋತಿರುವ ಒಬ್ಬ ಸಾಮಾನ್ಯ ಕಾರ್ಯಕರ್ತ, ನನ್ನ ಟಾರ್ಗೆಟ್ ಮಾಡಿ ನೀವು ಸಿಎಂ ಆಗುವುದಕ್ಕೆ ಆಗಲ್ಲ ಎಂದು ಡಿಸಿಎಂ ಹೇಳಿಕೆಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಸಿಟಿ ರವಿಗೆ ಟ್ರೀಟ್ ಮೆಂಟ್ ಅಗತ್ಯವಿದೆ ಎಂದು ಡಿಕೆಶಿ ಹೇಳಿದ್ದರು, ಇದಕ್ಕೆ ಸಿಟಿ ರವಿ ತಿರುಗೇಟು ನೀಡಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read