SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ.

ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು ಎಂದು ಹೇಳಲಾಗಿದೆ. ಬುಧವಾರ ತೋಟದಲ್ಲಿ ಎಳನೀರು ಕೊಯ್ಲು ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ.

ದೋಟಿಯಲ್ಲಿ ಎಳನೀರು ಕೊಯ್ಯುವಾಗ ತಲೆ ಮೇಲೆ ಬಿದ್ದು, ಸತೀಶ್ ರಾವ್ ಅವರ ತಲೆ ಹಾಗೂ ಕುತ್ತಿಗೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read