ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ.

34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. ಘಟನೆಯಲ್ಲಿ ಇಬ್ಬರು ಪಾರಾಗಿದ್ದಾರೆ. ನಿಂಗಪ್ಪನವರ ಜಮೀನಿನಲ್ಲಿ ಕೇಸಿಂಗ್ ಪೈಪ್ ಅಳವಡಿಸುವಾಗ ಘಟನೆ ನಡೆದಿದೆ.

ಕೊಳವೆ ಬಾವಿಯ ಕೇಸಿಂಗ್ ಪೈಪ್ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಹೊಸ ಕೇಸಿಂಗ್ ಪೈಪ್ ಅಳವಡಿಸುತ್ತಿದ್ದ ವೇಳೆ ಮಣ್ಣು ಕುಸಿದು ದುರಂತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳಾದ ನಿಂಗಪ್ಪ ಮತ್ತು ಮಾಧು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿ. ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read