ಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಪುಟ್ಟ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ.

ಜ್ಯೂಸ್ ಬಾಟಲ್ ನೊಂದಿಗೆ ಆಟವಾಡುತ್ತಿದ್ದ ಪುಟ್ಟ ಮಗು ಆಕಸ್ಮಿಕವಾಗಿ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಅದು ಗಂಟಲಲ್ಲಿ ಸಿಲುಕಿದ ಪರಿಣಾಮ ಉಸಿರಾಟ ಸಾಧ್ಯವಾಗದೆ ಮೃತಪಟ್ಟಿದೆ. ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರ ಶಾಸ್ತ್ರಿ -ಅನುಷಾ ಅವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ಮಗು.

ಮುಚ್ಚಳ ಹಿಡಿದುಕೊಂಡು ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಅದನ್ನು ಬಾಯಿಗೆ ಹಾಕಿಕೊಂಡಿದ್ದು, ಗಂಟಲಲ್ಲಿ ಮುಚ್ಚಳ ಸಿಲುಕಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆ ಮೃತಪಟ್ಟಿದೆ. ಕಂದನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read