SHOCKING: ಕುಡಿದು ಬಂದು ಜಗಳವಾಡಿದ ಗಂಡನ ಗುಪ್ತಾಂಗ ಕತ್ತರಿಸಿದ ಪತ್ನಿ ಪರಾರಿ

ನವದೆಹಲಿ: ಮನೆಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಪತಿಯ ಗುಪ್ತಾಂಗವನ್ನು ಕತ್ತರಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಸದ್ಯ ಪತಿ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಾರಿಯಾಗಿರುವ ಪತ್ನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಸಂತ್ರಸ್ತನನ್ನು ಬಿಹಾರದ ಮಧುಬನಿ ಮೂಲದ ವಿಷ್ಣು ಎಂದು ಗುರುತಿಸಲಾಗಿದ್ದು, ನಾಲ್ಕೈದು ತಿಂಗಳ ಹಿಂದೆ ಪತ್ನಿಯೊಂದಿಗೆ ದೆಹಲಿಗೆ ಆಗಮಿಸಿದ್ದ. ಅಕ್ಟೋಬರ್ 31 ರ ರಾತ್ರಿ 2:34 ರ ಸುಮಾರಿಗೆ ದಂಪತಿಗಳು ತೀವ್ರ ಜಗಳವಾಡಿದಾಗ ಈ ಘಟನೆ ನಡೆದಿದೆ.

ಈ ಭೀಕರ ಕೃತ್ಯದ ಬಗ್ಗೆ ಮಾಹಿತಿ ಪಡೆದ ರೋಹಿಣಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಬಡಾ ಹಿಂದೂ ರಾವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಹೆಚ್ಚಿನ ಆರೈಕೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಯಿತು. ಗಂಭೀರವಾಗಿ ಗಾಯವಾಗಿದ್ದರಿಂದ ಅವರು ಹೇಳಿಕೆ ನೀಡಲು ಸಾಧ್ಯವಾಗಿರಲಿಲ್ಲ.

ನವೆಂಬರ್ 2 ರಂದು ಪೊಲೀಸರು ವಿಷ್ಣು ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ರಾತ್ರಿ ಮದ್ಯಪಾನ ಮಾಡಿದ್ದು ಪತ್ನಿಯೊಂದಿಗೆ ಜಗಳಕ್ಕೆ ಕಾರಣವಾಗಿತ್ತು ಎಂದು ವಿವರಿಸಿದ್ದಾನೆ. ಇವರಿಬ್ಬರ ಜಗಳದ ಬಳಿಕ ಮನೆಯಿಂದ ಹೊರ ಬಂದ ಆಕೆ ಮತ್ತೆ ಬಂದು ಮಲಗಿದ್ದ ವೇಳೆ ಚೂಪಾದ ವಸ್ತುವಿನಿಂದ ಹಲ್ಲೆ ನಡೆಸಿ ಗುಪ್ತಾಂಗ ಕತ್ತರಿಸಿದ್ದಾಳೆ.

ತಲೆಮರೆಸಿಕೊಂಡಿರುವ ಆರೋಪಿಗಾಗಿ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರಾಥಮಿಕ ವರದಿಗಳು ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಪೊಲೀಸರು ಸಂಬಂಧಿತ ಕಾನೂನುಗಳ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read