ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮಾಡುತ್ತಿಲ್ಲ. ಹಾಸನದಲ್ಲಿ ಒಳ್ಳೆಯ ಪೊಲೀಸರು ತನಿಖೆ ನಡೆಸುತ್ತಿದ್ದು, ತಾರ್ಕಿಕ ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೆನ್ ಡ್ರೈವ್ ಪ್ರಕರಣದಲ್ಲಿ ಸಾಕ್ಷಿಯಾಗಿದ್ದೇನೆ. ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಿದ್ದೇನೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ. ನಾನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿರುವ ಆಡಿಯೋ ಬಗ್ಗೆ ಎಫ್ಎಸ್ಎಲ್ ನಿಂದ ಸತ್ಯ ಹೊರಬರಲಿದೆ ಎಂದರು.

ನಾನು ಹೊರ ಬಂದರೆ ಸರ್ಕಾರ ಪತನ ಎಂದು ಜೈಲಿನಲ್ಲಿದ್ದಾಗ ಹೇಳಿದ ಬಗ್ಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಕಾದು ನೋಡಿ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read