ಧಾರವಾಡ: ಕೃಷಿ ಕೆಲಸಕ್ಕೆ ಜಮೀನಿಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ-ದೇವನೂರ ಬಳಿ ನಡೆದಿದೆ.
ಶಿವಯ್ಯ ವಾಟ್ನಾಳಮಠ (29) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕುಂದಗೋಳದ ಶಿವಯ್ಯ ಹಾಗೂ ಇನ್ನಿಬ್ಬರು ಟ್ರ್ಯಾಕ್ಟರ್ ನಲ್ಲಿ ಬಿತ್ತನೆ ಕಾರ್ಯಕ್ಕಾಗಿ ಜಮೀನಿಗೆ ಹೋಗುತ್ತಿದ್ದರು. ಈ ವೇಳೆ ಗದ್ದೆಯ ಬಳಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ.
ಟ್ರ್ಯಾಕ್ಟರ್ ಅಡಿ ಸಿಲುಕಿದ ಶಿವಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಸುದೇವ ಹೈಭತ್ತಿ ಹಾಗೂ ಮಲ್ಲಿಕಾರ್ಜುನ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.