ಧರ್ಮಸ್ಥಳದಲ್ಲಿ ಭಕ್ತರ ಲಕ್ಷಾಂತರ ಮೌಲ್ಯದ ಹಣ, ಚಿನ್ನಾಭರಣ ಕಳವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ.

ಆಗಸ್ಟ್ 26ರಂದು ಘಟನೆ ನಡೆದಿದೆ. ಗದಗದ ಮಾಗಡಿ ನಿವಾಸಿ ಬಸವರಾಜ(38) ಧರ್ಮಸ್ಥಳಕ್ಕೆ ಬಂದಿದ್ದು, ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಕಾರ್  ನಿಲ್ಲಿಸಿ ಲಾಕ್ ಮಾಡಿಕೊಂಡು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಕಾರ್ ನ ಗಾಜು ಒಡೆದು ಹಣ, ಚಿನ್ನಾಭರಣ ದೋಚಲಾಗಿದೆ.

ಕಾರ್ ನಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರ, ಮೊಬೈಲ್ ಹಾಗೂ ಒಂದು ಲಕ್ಷಕ್ಕೂ ಅಧಿಕ ನಗದು ಕಳುವಾಗಿದೆ ಎಂದು ಹೇಳಲಾಗಿದೆ. ಧರ್ಮಸ್ಥಳ ಠಾಣೆ ಪೋಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read