BREAKING: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: 3ನೇ ಸ್ಥಳದಲ್ಲಿ ಪರಿಶೀಲನೆ ಮುಕ್ತಾಯ; 4ನೇ ಸ್ಥಳದಲ್ಲಿ ಶೋಧಕಾರ್ಯ ಆರಂಭ

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ತೀರಿಸಿರುವ ಮೂರು ಸ್ಥಳಗಳಲ್ಲಿ ಎಸ್ ಐಟಿ ತಂಡದಿಂದ ಶೋಧಕಾರ್ಯ ಮುಕ್ತಾಯವಾಗಿದೆ.

ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರರೊಬ್ಬರು ತಪ್ಪೊಪ್ಪಿಕೊಂಡಿದ್ದು, ಈ ಬಗ್ಗೆ ಎಸ್ ಐಟಿ ತಂಡ ಶೋಧಕಾರ್ಯ ನಡೆಸಿದೆ. ದೂರುದಾರ ನೀಡಿರುವ 13 ಸ್ಥಳಗಳ ಪೈಕಿ ಈಗಾಗಲೇ 3 ಸ್ಥಳಗಳಲ್ಲಿ ಮಣ್ಣು ಅಗೆದು ಶೋಧ ನಡೆಸಲಾಗಿದೆ. ಇದೀಗ ನಾಲ್ಕನೇ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದ್ದು, ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read