BREAKING: ಧರ್ಮಸ್ಥಳ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣವ್ ಮೊಹಂತಿ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಟೀಂ ಮುಖ್ಯಸ್ಥ ಪ್ರಣವ್ ಮೊಹಂತಿ ಗೃಹ ಸಚಿವ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ.

ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಹಾಗೂ ಅನುಚೇತ್ ಅವರು ಗೃಹ ಸಚಿವರನ್ನು ಭೇತಿಯಾಗಿದ್ದಾರೆ. ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಬೆಳವಣಿಗೆ, ಮುಂದಿನ ತನಿಖೆ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read