ಧಾರವಾಡ: ಧಾರವಾಡ ಹೆಚ್ಚುವರಿ ಡಿಸಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಹೆಚ್ಚುವರಿ ಡಿಸಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕಿ ಹೊಡೆದಿದೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಸಮೀಪ ಈ ಅಪಘಾತ ಸಂಭವಿಸಿದೆ.
ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ್ ಲಾಡ್ ಜೊತೆ ಹೆಚ್ಚುವರಿ ಡಿಸಿ ಗೀತಾ ತೆರಳಿದ್ದರು. ಮಳೆ ಹಾನಿ ವೀಕ್ಷಿಸಿ ವಾಪಾಸ್ ಆಗುತ್ತಿದ್ದಾಗ ಹೆಬಸೂರು ಬಳಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.