ನಟ ದರ್ಶನ್ ಮನವಿ ಪುರಸ್ಕರಿಸಿದ ಡಿಐಜಿ: ಬಳ್ಳಾರಿ ಜೈಲಲ್ಲಿ ಸರ್ಜಿಕಲ್ ಚೇರ್ ಸೌಲಭ್ಯ

ಬಳ್ಳಾರಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲಾಗಿದೆ.

ಬೆನ್ನು ಹುರಿ ಸಮಸ್ಯೆ ಇರುವ ಬಗ್ಗೆ ಮತ್ತು ಈ ಹಿಂದೆ ಕೈ ಮುರಿತದ ನೋವು ಇರುವ ಬಗ್ಗೆ ದರ್ಶನ್ ಕುಟುಂಬದವರು ಬಳ್ಳಾರಿ ಸೆಂಟ್ರಲ್ ಜೈಲ್ ಅಧಿಕಾರಿಗಳಿಗೆ ದಾಖಲೆ ಸಲ್ಲಿಸಿ ಶೌಚಕ್ಕೆ ಸರ್ಜಿಕಲ್ ಚೇರ್ ನೀಡುವುದಕ್ಕೆ ಮನವಿ ಮಾಡಿದ್ದರು. ಇವುಗಳನ್ನು ಪರಿಶೀಲಿಸಿದ ಜೈಲಿನ ಅಧಿಕಾರಿಗಳು, ವೈದ್ಯರ ತಂಡ ಸರ್ಜಿಕಲ್ ಚೇರ್ ನೀಡಲು ನಿರ್ಧರಿಸಿದೆ.

ಅಂತೆಯೇ ದರ್ಶನ್ ಮನವಿಯನ್ನು ಪುರಸ್ಕರಿಸಿದ ಜೈಲು ಡಿಐಜಿ ಸರ್ಜಿಕಲ್ ಚೇರ್ ಕೊಡಲು ಅಸ್ತು ಎಂದಿದ್ದಾರೆ. ವೈದ್ಯರ ವರದಿಯ ಬಳಿಕ ಕಾರಾಗೃಹ ಇಲಾಖೆ ಡಿಐಜಿ ಸರ್ಜಿಕಲ್ ಚೇರ್ ನೀಡಿದ್ದಾರೆ. ಆರೋಗ್ಯ ಇಲಾಖೆಯಿಂದ ಸರ್ಜಿಕಲ್ ಚೇರ್ ತರಿಸಿ ಕೊಡಲಾಗಿದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read