ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ ಶಾಸಕ ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಕುಟುಂಬಸ್ಥರನ್ನು ಯತ್ನಾಳ್ ಅವಮಾನಿಸಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಹೀಗೆ ಹೇಳುತ್ತಿದ್ದಾರೆ. ಇದೊಂದು ದೇಶ ವಿರೋಧಿ ಹೇಳಿಕೆ ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ಬಿಜೆಪಿ ಪದಾಧಿಕಾರಿಯನ್ನು ಬಂಧಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ಪೋಸ್ಟ್ ಹಾಕಿದ್ದು ಇದಕ್ಕೆ ಯತ್ನಾಳ್ ತಿರುಗೇಟು ನೀಡಿದ್ದಾರೆ. ದಿನೇಶ್ ಗುಂಡೂರಾವ್ ಮನೆಯಲ್ಲಿಯೇ ಅರ್ಧ ಪಾಕಿಸ್ತಾನ ಇದೆ. ಅವರಿಗೆ ದೇಶ ವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ. ನಮ್ಮ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಯಾಗಿದ್ದು, ಅವರ ಬಳಿ ಯಾರು ಬಂದಿರುತ್ತಾರೆ? ಏನು? ಎಂದು ಗೊತ್ತಾಗುತ್ತದೆ. ತನಿಖೆಗೆ ಸಹಕಾರ ನೀಡುವುದಾಗಿ ಆತ ಹೇಳಿದ್ದಾನೆ ಎಂದು ಹೇಳಿಕೆ ನೀಡಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read