ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ ತನಿಖೆ ಚುರುಕುಗೊಳಿಸಿದ್ದು, ಮರಣೋತ್ತರ ಪರೀಕ್ಷೆಯ ವೇಳೆ ದೇಹದಿಂದ ಸಂಗ್ರಹಿಸಿದ ಕೆಲವು ಸ್ಯಾಂಪಲ್ ಗಳನ್ನು ಎಫ್ಎಸ್ಎಲ್ ಗೆ ರವಾನೆ ಮಾಡಲಾಗಿದೆ.

ಗುರುಪ್ರಸಾದ್ ಸಾವಿಗೆ ಮೊದಲು ಏನನ್ನಾದರೂ ಸೇವಿಸಿದ್ದರಾ? ನಿಖರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾವಾಗ ಎಂಬುದರ ಬಗ್ಗಯೂ ತನಿಖೆ ನಡೆಸಲಾಗಿದೆ. ಕೊಳೆತ ದೇಹದಿಂದ ಹರಿದಿರುವ ರಕ್ತದ ಬಗ್ಗೆ ಅನುಮಾನ ಹಿನ್ನೆಲೆಯಲ್ಲಿ ರಕ್ತದ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಗೆ ರವಾನೆ ಮಾಡಲಾಗಿದೆ.

ಸಾಲದ ಸುಳಿಯಲ್ಲಿ ಗುರುಪ್ರಸಾದ್ ಸಿಲುಕಿದ್ದರು. ಸಾವಿಗೆ ಕಿರುಕುಳ ಕಾರಣವೇ? ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಖಿನ್ನತೆ, ಸೋರಿಯಾಸಿಸ್ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ಪತ್ತೆ ಮಾಡಲು ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read