ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು ಪ್ರತಿ ದಿನ ಸುಮಾರು 5,600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ ಘನತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಧೀರಜ್ ಮುನಿರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಉತ್ತರ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ 2 ದಿಕ್ಕುಗಳಲ್ಲಿ (ಉತ್ತರ ಮತ್ತ ದಕ್ಷಿಣ) ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಹಸಿ ತ್ಯಾಜ್ಯದ ಬಯೋ ಮಿಥಿನೇಷನ್‌ನಿಂದ ಅನಿಲ ಉತ್ಪಾದನೆ, ಗೊಬ್ಬರ ತಯಾರಿಕೆ, ಒಣತ್ಯಾಜ್ಯದ ಮರುಬಳಕೆ ಮತ್ತು ವಿದ್ಯುತ್ ಉತ್ಪಾದನೆ ಇತ್ಯಾದಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.

ನೂತನ ಮಾದರಿಯ ಟೆಕ್ನಾಲಜಿ ಬಳಸಿಕೊಂಡು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ಕೀಟ (Black Soldier Fly) ಕಸವನ್ನು ತಿಂದು ಗೊಬ್ಬರವಾಗುವ ಬಗ್ಗೆ ವರದಿಯಾಗಿರುತ್ತದೆ. ಈ ಬಗ್ಗೆ ಸಮೀಕ್ಷೆ ನಡೆಸಿ ಅದನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಯೋಚಿಸಲಾಗುತ್ತಿದೆ. ಇದಲ್ಲದೇ ಇನ್ನೂ 2-3 ಪ್ರಯೋಗಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಒಟ್ಟಾರೆಯಾಗಿ ಜನ ಸಾಮಾನ್ಯರ ಮೇಲೆ ಯಾವುದೇ ದುಷ್ಪರಿಣಾಮ ಉಂಟಾಗದಂತೆ ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read