BREAKING NEWS: ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟ: ಮೌಲ್ಯಮಾಪನಕ್ಕೆ ಶಾಸಕ ಒತ್ತಾಯ

ಚಿಕ್ಕಮಗಳೂರು: ರಾಜ್ಯದ ಕೆಲ ಸಚಿವರ ಕಾರ್ಯವೈಖರಿಗೆ ಕಾಂಗ್ರೆಸ್ ನಲ್ಲೇ ಅಸಮಾಧಾನ ಸ್ಪೋಟಗೊಂಡಿದೆ.

ಚಿಕ್ಕಮಗಳೂರಿನಲ್ಲಿ ಕಡೂರು ಶಾಸಕ ಆನಂದ್ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಕೆಲವು ಸಚಿವರ ವಿರುದ್ಧ ನಮ್ಮ ಶಾಸಕರಲ್ಲಿ ಅಸಮಾಧಾನ ಇದೆ. ಸಚಿವರು ಯಾವುದೇ ಕೆಲಸ ಮಾಡುತ್ತಿಲ್ಲ ಎನ್ನುವ ಅಪಸ್ವರ ಇದೆ ಎಂದು ಹೇಳಿದ್ದಾರೆ.

ನಾಲ್ವರು ಸಚಿವರು ವಿರುದ್ಧ ರಾಜ್ಯದ ಜನರಲ್ಲಿಯೂ ಅಸಮಾಧಾನ ಇದೆ. ಕೆಲವು ಸಚಿವರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸಚಿವರ ಕಾರ್ಯವೈಖರಿಯ ಮೌಲ್ಯಮಾಪನ ಮಾಡಬೇಕು. ಶಾಸಕರಿಂದ ಮೌಲ್ಯಮಾಪನ ಮಾಡಿ ಅಭಿಪ್ರಾಯ ಸಂಗ್ರಹಿಸಲಿ ಎಂದು ಪಕ್ಷದ ಹೈಕಮಾಂಡ್ ಗೆ ಕಾಂಗ್ರೆಸ್ ಶಾಸಕ ಆನಂದ್ ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read