ರೈತರು ಸೇರಿ ರಾಜ್ಯದ ಜನತೆಗೆ ಶುಭ ಸುದ್ದಿ: ತಿಂಗಳಾಂತ್ಯಕ್ಕೆ ಎಲ್ಲಾ ಕಡೆ ಮಳೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಬಾಳೆಹೊನ್ನೂರಿನಲ್ಲಿ 2 ಸೆ.ಮೀ., ಬೆಳಗಾವಿಯ ಲೋಂಡಾದಲ್ಲಿ 1ಸೆ.ಮೀ. ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ.

ತಿಂಗಳಾಂತ್ಯಕ್ಕೆ ಮಾರ್ಚ್ 30 ಮತ್ತು 31 ರಂದು ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read