ವಿಚ್ಛೇದಿತೆ ಮದುವೆಯಾಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ವಂಚನೆ

ಮೈಸೂರು: ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಕೇಳಿ ಬಂದಿದೆ. ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯಲ್ಲಿ ಪ್ರಕರಣ ನಡೆದಿದೆ.

34 ವರ್ಷದ ವಿಚ್ಛೇದಿತೆಯನ್ನು ಮದುವೆಯಾಗುವುದಾಗಿ ನಂಬಿಸಿದ 25 ವರ್ಷದ ಯುವಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾನೆ. ಮಹಿಳೆ ಗರ್ಭಿಣಿಯಾದ ಬಳಿಕ ನಾಪತ್ತೆಯಾಗಿದ್ದು, ಘಟನೆ ಸಂಬಂಧ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ತೆ 2018 ರಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ತೇರಂಬಳ್ಳಿ ಗ್ರಾಮದ ಹರೀಶ್ ನ ಪರಿಚಯವಾಗಿದೆ. ಇಬ್ಬರೂ ಹವ್ಯಾಸಿ ಹಾಡುಗಾರರಾಗಿದ್ದು, ಆಗಾಗ ಭೇಟಿಯಾಗುತ್ತಿದ್ದರು. ಒಮ್ಮೆ ಮದ್ಯ ಕೊಡಿಸಿ ಬಲವಂತವಾಗಿ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಗರ್ಭಿಣಿಯಾದ ನಂತರ ಸ್ಟಾಫ್ ನರ್ಸ್ ಆಗಿರುವ ಸಂಬಂಧಿ ಸಹಾಯದಿಂದ ಗರ್ಭಪಾತದ ಮಾತ್ರೆಗಳನ್ನು ತರಿಸಿ ಮಹಿಳೆಗೆ ನೀಡಿದ್ದ. ಮದುವೆಗೆ ಒಪ್ಪದ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read