SHOCKING: ಬೈಕ್ ಗೆ ಅಡ್ಡ ಬಂದ ಬೀದಿ ನಾಯಿ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸವಾರ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ರಸ್ತೆಯಲ್ಲಿ ಬೀದಿ ನಾಯಿ ಅಡ್ಡ ಬಂದಿದ್ದರಿಂದ ಬೈಕ್ ಸವಾರ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡುನಲ್ಲಿ ನಡೆದಿದೆ.

ಆನೆದಿಬ್ಬ ನಿವಾಸಿ ಜಾಫರ್(24) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಶುಕ್ರವಾರ ಬೆಳಗ್ಗೆ ಬೆಟ್ಟದಮನೆ ಗ್ರಾಮಕ್ಕೆ ತೆರಳಿದ್ದ ಜಾಫರ್ ವಾಪಸ್ ಗೋಣಿಬೀಡಿಗೆ ಬರುವಾಗ ಬೀದಿ ನಾಯಿ ಬೈಕ್ ಗೆ ಅಡ್ಡ ಬಂದಿದೆ. ನಿಯಂತ್ರಣ ತಪ್ಪಿದ ಬೈಕ್ ಚರಂಡಿಗೆ ಬಿದ್ದಿದ್ದು, ಚರಂಡಿಗೆ ಅಳವಡಿಸಿದ್ದ ಸಿಮೆಂಟ್ ಚಪ್ಪಡಿಗಳಿಗೆ ಜಾಫರ್ ತಲೆ ಬಡಿದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾಫರ್ ಎಲ್ಲರೊಂದಿಗೆ ಆತ್ಮೀಯರಾಗಿದ್ದರು. ಸ್ನೇಹಜೀವಿ ಜಾಫರ್ ನಿಧನಕ್ಕೆ ಸ್ಥಳೀಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read