BIG NEWS : ಕನ್ನಡಿಗರ ತಾಳ್ಮೆ ಪರೀಕ್ಷಿಸಬೇಡಿ : ಕಾವೇರಿಗಾಗಿ ಧ್ವನಿ ಎತ್ತಿದ ಮಳೆ ಹುಡುಗಿ ‘ಪೂಜಾ ಗಾಂಧಿ’

ಬೆಂಗಳೂರು : ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್ ಸಾಥ್ ನೀಡಿದ್ದು, ಫಿಲ್ಮ್ ಚೇಂಬರ್ ಎದುರು ನಟ ನಟಿಯರು ಧರಣಿ ನಡೆಸುತ್ತಿದ್ದಾರೆ.

ಇದೇ ವೇಳೆ ಮಾತನಾಡಿದ ಮಳೆ ಹುಡುಗಿ ನಟಿ ಪೂಜಾ ಗಾಂಧಿ  ನಮ್ಮ ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕನ್ನಡಿಗರು ತುಂಬಾ ತಾಳ್ಮೆ ಇರುವವರು. ನಮ್ಮ ತಾಳ್ಮೆಯನ್ನು ಪರೀಕ್ಷಿಸಬಾರದು. ಎಲ್ಲದಕ್ಕೂ ಒಂದು ಕೀಲಿಗೈ ಇರುತ್ತೆ. ಹಾಗೇ ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ. ನಾವು ಆ ಪರಿಹಾರ ಹುಡುಕಲು ಮುಂದಾಗಬೇಕು, ಈ ನಾಡಿಗೆ ಚೆನ್ನಾಗಿ ಮಳೆ ಬರಲಿ ಅಂತ ದೇವರಲ್ಲಿ ಬೇಡಿಕೊಳ್ಳುತ್ತೇನೆ. ಎಂದು ನಟಿ ಪೂಜಾ ಗಾಂಧಿ ಹೇಳಿದರು.

ಧರಣಿಯಲ್ಲಿ ಹಿರಿಯ ನಟ ಶ್ರೀನಾಥ್, ಶ್ರೀನಿವಾಸ್ ಮೂರ್ತಿ, ಪದ್ಮಾ ವಾಸಂತಿ, ನಟಿ ಪೂಜಾ ಗಾಂಧಿ, ಉಮಾಶ್ರೀ, ಶೃತಿ,ಅನಿರುದ್ದ, ಚಿಕ್ಕಣ್ಣ ಸೇರಿದಂತೆ ಅನೇಕ ನಟ ನಟಿಯರು , ನಿರ್ಮಾಪಕರು, ನಿರ್ದೇಶಕರು ಭಾಗಿಯಾಗಿದ್ದಾರೆ .ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ರಾಜ್ಯದ ಹಲವು ಕಡೆ ಪ್ರತಿಭಟನೆ ಕಾವು ಜೋರಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read