BIG NEWS: ಅಧಿಕಾರ ಹಂಚಿಕೆ ವಿಚಾರ: ನನಗಿಂತ ಮುನಿಯಪ್ಪನವರಿಗೆ ಹೆಚ್ಚು ಗೊತ್ತಿರಬಹುದು ಎಂದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಹೈಕಮಾಂಡ್ ನಡುವೆ ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆ ನಡೆದಿದೆ ಎಂದು ಹೇಳಿಕೆ ನೀಡಿದ್ದು, ಮುನಿಯಪ್ಪ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವ ಡಾ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರ್ಯಾರು ಎಲ್ಲೆಲ್ಲಿಇ ಮಾಹಿತಿ ಪಡೆದಿದ್ದಾರೆ ಗೊತ್ತಿಲ್ಲ. ಮುನಿಯಪ್ಪನವರಿಗೆ ಈ ಬಗ್ಗೆ ಮಾಹಿತಿ ಇರಬಹುದು. ನನಗಿಂತ ಹೆಚ್ಚಾಗಿ ಅವರಿಗೆ ಮಾಹಿತಿ ಇರಬಹುದು ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಅಧ್ಯಕ್ಷರು, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ನಮ್ಮಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read