ಬೆಂಗಳೂರು : ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ‘ಲಿಂಗರಾಜ ಕಣ್ಣಿ’ ಗೆ ಜಾಮೀನು ಮಂಜೂರಾಗಿದೆ .ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿರುವ ನ್ಯಾಯಾಲಯವು ಲಿಂಗರಾಜ್ ಕಣ್ಣಿ ಎಂದೂ ಕರೆಯಲ್ಪಡುವ ಲಿಂಗರಾಜ್ ಅಪ್ಪರೈ ಅಲ್ಗುಡ್ ಅವರಿಗೆ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜಾಮೀನು ನೀಡಿದೆ.
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬಂಧಿಸಲಾಗಿತ್ತು. . ಈ ಬೆನ್ನಲ್ಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ‘ಲಿಂಗರಾಜ ಕಣ್ಣಿ’ ಉಚ್ಚಾಟನೆ ಮಾಡಲಾಗಿತ್ತು.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಆಪ್ತರಾಗಿರುವ ಲಿಂಗರಾಜ ಕಣ್ಣಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದರು. ಮಹಾರಾಷ್ಟ್ರದ ಕಲ್ಯಾಣ ಠಾಣೆ ಪೋಲೀಸರು ಲಿಂಗರಾಜ ಬಳಿ ಇದ್ದ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.