BREAKING: ತಾಂತ್ರಿಕ ದೋಷದಿಂದಾಗಿ ದುಬೈಗೆ ತೆರಳುತ್ತಿದ್ದ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ…..!

ಬಾಂಗ್ಲಾದೇಶದಿಂದ ದುಬೈಗೆ ತೆರಳುತ್ತಿದ್ದ ಬಾಂಗ್ಲಾದೇಶ ಏರ್‌ಲೈನ್ಸ್‌ನ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ನಾಗ್ಪುರದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷದ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ವಿಮಾನವು ಸುರಕ್ಷಿತವಾಗಿ ಲ್ಯಾಂಡಾಗಿದೆ ಮತ್ತು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಈ ಘಟನೆಯಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಾಂತ್ರಿಕ ದೋಷವನ್ನು ಸರಿಪಡಿಸಿದ ನಂತರ ವಿಮಾನವು ತನ್ನ ಪ್ರಯಾಣವನ್ನು ಮುಂದುವರಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಈ ರೀತಿಯ ತುರ್ತು ಸಂದರ್ಭಗಳನ್ನು ನಿಭಾಯಿಸಲು ವಿಮಾನ ನಿಲ್ದಾಣವು ಸನ್ನದ್ಧವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read