ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೇಂದ್ರದಿಂದ ಮೊಬೈಲ್ ಗೆ ತುರ್ತು ಸಂದೇಶ

ನವದೆಹಲಿ: ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕವೇ ಸಂದೇಶ ರವಾನಿಸುವ ವ್ಯವಸ್ಥೆಯನ್ನು ದೇಶಾದ್ಯಂತ ಯಶಸ್ವಿಯಾಗಿ ಪ್ರಯೋಗಕ್ಕೆ ಒಳಪಡಿಸಲಾಗಿದೆ.

ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರಿಗೆ ಮೊದಲೇ ಮಾಹಿತಿ ನೀಡಲು ಈ ವ್ಯವಸ್ಥೆಯನ್ನು ಬಳಕೆ ಮಾಡಲಿದ್ದು, ಪ್ರಯೋಗ ನಡೆಸಲಾಗಿದೆ.

ಗುರುವಾರ ಮಧ್ಯಾಹ್ನ 1:35ಕ್ಕೆ ದೇಶಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಮೊಬೈಲ್ ಬಳಕೆದಾರರಿಗೆ ಎಮರ್ಜೆನ್ಸಿ ಸಂದೇಶ ರವಾನೆ ಮಾಡಲಾಗಿದೆ. ಇದು ಪರೀಕ್ಷಾರ್ಥ ಸಂದೇಶವಾಗಿದ್ದು, ಇದನ್ನು ಭಾರತ ಸರ್ಕಾರದ ಟೆಲಿಕಾಂ ಸಚಿವಾಲಯದ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ರವಾನಿಸಲಾಗಿದೆ. ನಿಮ್ಮ ಕಡೆಯಿಂದ ಈ ಸಂದೇಶಕ್ಕೆ ಪ್ರತಿಕ್ರಿಯೆ ಅಗತ್ಯವಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ದೇಶವ್ಯಾಪಿ ತುರ್ತು ಸಂದೇಶ ರವಾನಿಸುವ ವ್ಯವಸ್ಥೆಯ ಪ್ರಯೋಗ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಸಂದೇಶ ರವಾನಿಸಲಾಗಿದೆ ಎಂದು ಹೇಳಲಾಗಿದೆ.

ಪ್ರವಾಹ, ಸುನಾಮಿ, ಭೂಕಂಪದಂತಹ ತುರ್ತು ಸಂದರ್ಭದಲ್ಲಿ ದೇಶಾದ್ಯಂತ ಜನರಿಗೆ ಮೊದಲೇ ಮಾಹಿತಿ ನೀಡಲು ಸಂದೇಶ ಕಳುಹಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read