ಮಡಿಕೇರಿ: ಅಣ್ಣ-ತಮ್ಮನ ನಡುವೆ ಆಸ್ತಿಗಾಗಿ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಭ್ಯತ್ ಮಂಗಲದಲ್ಲಿ ನಡೆದಿದೆ.
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಳಂಬೆ ವಿನು ಬೆಳ್ಯಪ್ಪ (53) ಮೃತ ದುರ್ದೈವಿ. ಮಣಿ ತಮ್ಮನನ್ನೇ ಹತ್ಯೆಗೈದ ಅಣ್ಣ.
ಅಭ್ಯತ್ ಮಂಗಲದಲ್ಲಿ ತೋಟದ ಗೋದಾಮಿನಲ್ಲಿ ಪೈಪ್ ಗಳ ಪರಿಶೀಲನೆಗೆಂದು ವಿನು ಬೆಳ್ಯಪ್ಪ ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದ ಸಹೋದರಮಣಿ ಏಕಾಏಕಿ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿಗೆ ವಿನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಆರೋಪಿ ಮಣಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.