ಟಿಕೆಟ್ ಕೊಟ್ಟರೆ ಸ್ಪರ್ಧೆ, ಇಲ್ಲದಿದ್ರೆ ಪಕ್ಷ ಸಂಘಟನೆ: ಆರಗ ಜ್ಞಾನೇಂದ್ರ

ಬೆಂಗಳೂರು: 5 ಬಾರಿ ಸೋತಿದ್ದೇನೆ, 4 ಬಾರಿ ಗೆದ್ದಿದ್ದೇನೆ. ಟಿಕೆಟ್ ಕೊಟ್ಟರೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಕೊಡದಿದ್ದರೆ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಗೃಹ ಸಚಿವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಪಕ್ಷ ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷ ಸಂಘಟನೆ ಕೆಲಸ ಮಾಡುತ್ತೇನೆ. ಇದುವರೆಗೆ 5 ಸಲ ಚುನಾವಣೆಯಲ್ಲಿ ಸೋತು, 4 ಬಾರಿ ಗೆದ್ದಿದ್ದೇನೆ. ಗೆದ್ದಾಗ ಹಿಗ್ಗಿಲ್ಲ, ಸೋತಾಗ ಕುಗ್ಗಿಲ್ಲ. ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡಿಕೊಂಡು ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read