ಮತದಾನ ಜಾಗೃತಿಗೆ ನಿರ್ದೇಶಕ ರಾಜಮೌಳಿ ನೇಮಕ: ಜೆಡಿಎಸ್ ಆಕ್ಷೇಪ

ರಾಯಚೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿಗೆ ರಾಯಚೂರು ಜಿಲ್ಲಾ ರಾಯಭಾರಿಯಾಗಿ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯ ಚುನಾವಣಾ ಆಯೋಗದ ನಡೆಗೆ ರಾಯಚೂರು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಎನ್. ಶಿವಶಂಕರ್ ಆಕ್ಷೇಪಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶಿವಶಂಕರ್, ರಾಜಮೌಳಿ ಅವರ ತಂದೆ ಬಿಜೆಪಿಯಿಂದ ರಾಜ್ಯಸಭೆ ಸದಸ್ಯ ಸದಸ್ಯರಾಗಿದ್ದಾರೆ. ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ‘ಆರ್.ಎಸ್.ಎಸ್.’ ಎಂದು ಹೆಸರಿಟ್ಟಿದ್ದಾರೆ. ಈ ವಿಚಾರಗಳು ರಾಜಮೌಳಿ ಬಿಜೆಪಿ ಪರವಾಗಿರುವುದನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಆಂಧ್ರಪ್ರದೇಶದ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ರಾಜಮೌಳಿ ಅವರನ್ನು ಮತದಾನ ಜಾಗೃತಿ ರಾಯಭಾರಿಯಾಗಿ ನೇಮಿಸಿರುವುದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ರಾಜ್ಯ ಚುನಾವಣಾ ಆಯೋಗ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read