ಬೈಕ್ ನಲ್ಲಿ ತೆರಳುವಾಗ ನರ್ಸ್ ಬಲಿ ಪಡೆದ ಕೇಬಲ್ ವೈರ್: ವಿದ್ಯುತ್ ಪ್ರವಹಿಸಿ ಸಾವು

ತುಮಕೂರು: ಕೇಬಲ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಇಪ್ಪಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಇಪ್ಪಾಡಿ ಆಸ್ಪತ್ರೆಯ ನರ್ಸ್ ಲಕ್ಷ್ಮೀಬಾಯಿ ಜಾಧವ್(36) ಮೃತಪಟ್ಟವರು ಎಂದು ಹೇಳಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಚಿಂಚಲಕಟ್ಟೆ ನಿವಾಸಿ ಲಕ್ಷ್ಮಿ ಅವರು ಕೆಲಸ ಮುಗಿಸಿ ಕುಣಿಗಲ್ ನ ನಿವಾಸಕ್ಕೆ ಬೈಕ್ ನಲ್ಲಿ ತೆರಳುವಾಗ ಘಟನೆ ನಡೆದಿದೆ.

ಇಪ್ಪಾಡಿ ಸರ್ಕಾರಿ ಶಾಲೆಯ ಶಿಕ್ಷಕ ಲಕ್ಷ್ಮಣ್ ಅವರೊಂದಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್ ಅವರ ಮೇಲೆ ಬಿದ್ದಿದೆ. ಕೇಬಲ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದೆ. ವಿದ್ಯುತ್ ತಂತಿ ಸ್ಪರ್ಶವಾಗಿದ್ದ ಕೇಬಲ್ ವೈರ್ ಲಕ್ಷ್ಮಿ ಅವರ ಮೈಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸವಾರ ಲಕ್ಷ್ಮಣ್ ಅವರಿಗೆ ಗಂಭೀರ ಗಾಯವಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read