ದುರಸ್ತಿ ವೇಳೆಯಲ್ಲೇ ವಿದ್ಯುತ್ ಸಂಪರ್ಕ: ಕರೆಂಟ್ ಶಾಕ್ ನಿಂದ ಬೆಸ್ಕಾಂ ಗುತ್ತಿಗೆ ನೌಕರ ಸಾವು

ಬೆಂಗಳೂರು: ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣದ ಬಳಿ ನಡೆದಿದೆ.

ಕೋಲಾರ ಮೂಲದ ಅನಿಲ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಸ್ಕಾಂ ನಿರ್ಲಕ್ಷದಿಂದ ಅವರು ಸಾವನ್ನಪ್ಪಿದ್ದಾರೆ. ದುರಸ್ತಿ ವೇಳೆಯಲ್ಲಿ ವಿದ್ಯುತ್ ಸಂಪರ್ಕ ನೀಡಿದ್ದರಿಂದ ಅವಘಡ ಸಂಭವಿಸಿದೆ.

ಚೆನ್ನೈ ಎಕ್ಸ್ ಪ್ರೆಸ್ ಕಾರಿಡಾರ್ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳನ್ನು ಬದಲಿಸುವ ವೇಳೆ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read