ತೋಟದಲ್ಲಿ ಔಷಧ ಸಿಂಪಡಿಸುವಾಗಲೇ ದುರಂತ: ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್ ನಿಂದ ವಿದ್ಯುತ್ ಪ್ರವಹಿಸಿ ಶ್ರೀಕಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read