BREAKING NEWS: ತೋಟದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ದಾವಣಗೆರೆ: ಅಡಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ.

ಮಲ್ಲಿಕಾರ್ಜುನ(65), ಕತ್ತಕಗೆರೆ ಚಂದ್ರಪ್ಪ(45) ಮೃತಪಟ್ಟವರು. ಅಡಿಕೆ ತೋಟಕ್ಕೆ ನೀರು ಹಾಯಿಸಲು ಹೋದ ವೇಳೆ ದುರ್ಘಟನೆ ಸಂಭವಿಸಿದೆ.

ಪಂಪ್ ಸೆಟ್ ಆನ್ ಮಾಡುವಾಗ ಮದರ್ ಬೋರ್ಡ್ ನಿಂದ ವಿದ್ಯುತ್ ಪ್ರವಹಿಸಿ ಮಲ್ಲಿಕಾರ್ಜುನ ನೆಲಕ್ಕೆ ಬಿದ್ದಿದ್ದಾರೆ. ಅವರ ರಕ್ಷಣೆಗೆ ಹೋದ ಕಾರ್ಮಿಕ ಚಂದ್ರಪ್ಪನಿಗೂ ವಿದ್ಯುತ್ ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read