ಬೆಂಗಳೂರು: ಬೆಸ್ಕಾಂ ನಿರ್ಲಕ್ಷಕ್ಕೆ ಬಾಲಕ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಘಟನೆ ನಡೆದಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಪೊರಕೆ ತಾಗಿ ಕರೆಂಟ್ ಶಾಕ್ ಹೊಡೆದು ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನ ಸ್ವತಂತ್ರನಗರದಲ್ಲಿ ನಡೆದಿದೆ.
ಇಲ್ಲಿನ ಬಸವನಪುರ ವಾರ್ಡ್ ನಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕ ಪೊರಕೆ ಬಿಸಾಕಲು ಹೋಗಿದ್ದ. ಈ ವೇಳೆ ಪೊರಕೆಗೆ ವಿದ್ಯುತ್ ತಂತಿ ತಗುಲಿ, ವಿದ್ಯುತ್ ಪ್ರವಹಿಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಬಾಲಕನನ್ನು ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.