BIG NEWS: ವಿದ್ಯುತ್ ತಂತಿಗೆ ಪೊರಕೆ ತಾಗಿ ಬಾಲಕನಿಗೆ ಕರೆಂಟ್ ಶಾಕ್: ಸಾವು ಬದುಕಿನ ನಡುವೆ ಹೋರಾಟ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷಕ್ಕೆ ಬಾಲಕ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಘಟನೆ ನಡೆದಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಪೊರಕೆ ತಾಗಿ ಕರೆಂಟ್ ಶಾಕ್ ಹೊಡೆದು ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನ ಸ್ವತಂತ್ರನಗರದಲ್ಲಿ ನಡೆದಿದೆ.

ಇಲ್ಲಿನ ಬಸವನಪುರ ವಾರ್ಡ್ ನಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕ ಪೊರಕೆ ಬಿಸಾಕಲು ಹೋಗಿದ್ದ. ಈ ವೇಳೆ ಪೊರಕೆಗೆ ವಿದ್ಯುತ್ ತಂತಿ ತಗುಲಿ, ವಿದ್ಯುತ್ ಪ್ರವಹಿಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಬಾಲಕನನ್ನು ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read