‘ಇಂಧನ ಸಚಿವರು ಕಾಣೆಯಾಗಿದ್ದಾರೆ’ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ವಾರ್


ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟ್ ವಾರ್ ಮುಂದುವರೆದಿದ್ದು, ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿದೆ.

ಚಿಕ್ಕಮಗಳೂರು ನಗರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಅಭಿಯಾನ ಆರಂಭಿಸಿದ್ದಾರೆ. ನಗರದ ತಾಲೂಕು ಆಫೀಸ್, ಹಾಗೂ ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಅಂಟಿಸಿದ್ದಾರೆ.

ವರ್ಗಾವಣೆ ದಂಧೆ, ಗ್ಯಾರಂಟಿ ಯೋಜನೆ ಕುರಿತು ಟೀಕಾ ಪ್ರಹಾರ ನಡೆಸಿರುವ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಪೋಸ್ಟರ್ ಬಿಡುಗಡೆ ಮಾಡಿದೆ. ಕಾರ್ಯಕರ್ತರು ಬೀದಿ ಬೀದಿಗಳಲ್ಲಿ ಪೋಸ್ಟರ್ ಅಂಟಿಸುತ್ತಿದ್ದಾರೆ

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read