alex Certify ʼಮಹಾʼ ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ನಟಿ ಕಂಗನಾ ವಿರುದ್ದ ಹೊಸ ಅಸ್ತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಹಾʼ ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ನಟಿ ಕಂಗನಾ ವಿರುದ್ದ ಹೊಸ ಅಸ್ತ್ರ

ವಿವಾದಗಳ ಸರಮಾಲೆ ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಈಗ ಉದ್ದವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ದ ತಿರುಗಿಬಿದ್ದಿದ್ದಾರೆ. ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಗೂಢ ಸಾವಿನ ಬಳಿಕ ಈ ಜಟಾಪಟಿ ಆರಂಭವಾಗಿದ್ದು, ಇನ್ನೂ ಮುಂದುವರೆದಿದೆ.

ಕಂಗನಾ ಮುಂಬೈನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದಾರೆ ಎಂಬ ಕಾರಣಕ್ಕೆ ಬೃಹನ್ಮುಂಬೈ ಪಾಲಿಕೆ ಅಧಿಕಾರಿಗಳು ಅದರ ನೆಲಸಮಕ್ಕೆ ಮುಂದಾಗಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಘಟನೆ ಬಳಿಕ ಕಂಗನಾ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಿನ ಸಮರ ತಾರಕಕ್ಕೇರಿದೆ.

ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ವಿರುದ್ದ ತೀವ್ರ ವಾಗ್ದಾಳಿ ನಡೆಸಿ ಕಂಗನಾ ವಿಡಿಯೋ ಬಿಡುಗಡೆ ಮಾಡಿದ್ದ ಬಳಿಕ ಮಹಾರಾಷ್ಟ್ರ ಸರ್ಕಾರ ಈಗ ಕಂಗನಾ ವಿರುದ್ದ ಹೊಸ ಅಸ್ತ್ರವೊಂದನ್ನು ಪ್ರಯೋಗಿಸಲು ಮುಂದಾಗಿದೆ. ಈ ಹಿಂದೆ ನಟನೊಬ್ಬ ಟಿವಿ ಸಂದರ್ಶನದಲ್ಲಿ ಪಾರ್ಟಿಗಳಲ್ಲಿ ಕಂಗನಾ ತಮಗೆ ಡ್ರಗ್ಸ್‌ ಸೇವಿಸಲು ಬಲವಂತ ಪಡೆಸುತ್ತಿದ್ದರು ಎಂದು ಮಾಡಿದ್ದ ಆರೋಪವನ್ನೇ ಎಳೆಯಾಗಿಟ್ಟುಕೊಂಡು ಕಂಗನಾ ವಿರುದ್ದ ತನಿಖೆಗೆ ಮುಂದಾಗಿದೆ. ಇದು ಮುಂದಿನ ದಿನಗಳಲ್ಲಿ ಕಂಗನಾಗೆ ಸಂಕಷ್ಟ ತಂದೊಡ್ಡಿದರೂ ಅಚ್ಚರಿಯಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...