alex Certify ಅಪೂರ್ವ ಪ್ರತಿಭೆಗೆ ಮನಸೋತ ನಿಖಿಲ್ ಕುಮಾರ್ ಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪೂರ್ವ ಪ್ರತಿಭೆಗೆ ಮನಸೋತ ನಿಖಿಲ್ ಕುಮಾರ್ ಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ, ಕಣ್ಣಿಲ್ಲದೆ ಇರುವ ವ್ಯಕ್ತಿಯೊಬ್ಬರು ಪಿಯೊನೋ ನುಡಿಸುತ್ತಿದ್ದು ಅವರ ಪ್ರತಿಭೆಗೆ ನಿಖಿಲ್ ಕುಮಾರಸ್ವಾಮಿ ಮನಸೋತಿದ್ದಾರೆ. ಅಲ್ಲದೆ ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಣ್ಣಿಲ್ಲದಿದ್ದರೂ ಅಪೂರ್ವ ಪ್ರತಿಭೆಯಾಗಿರುವ ವಿಶ್ವನಾಥ್ ಅವರು ಹಾಸನದ ಈಜಿಪುರದವರಂತೆ, ಇಂದು ಆಕಸ್ಮಿಕವಾಗಿ ಇವರ ಭೇಟಿಯಾಯಿತು. ಇವರು ಇಂಪಾಗಿ ಪಿಯಾನೋ ನುಡಿಸುವುದನ್ನು ಕೇಳಿ ಸಂತೋಷವಾಯಿತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ದೈಹಿಕ ನ್ಯೂನ್ಯತೆಗಳಿದ್ದರೂ ಸಾಧಿಸುವ ಛಲವಿರುವವರಿಗೆ ಯಾವುದೂ ಅಡ್ಡಿಯಾಗುವುದಿಲ್ಲ. ಇವರ ಸಾಧನೆ ವಿಕಲಚೇತನರಿಗೆ ಮಾತ್ರ ಅಲ್ಲ ಎಲ್ಲರಿಗೂ ಸ್ಫೂರ್ತಿಯಾಗುವಂಥದ್ದು ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...