alex Certify ಅಪ್ಪು ಓದಿಸುತ್ತಿದ್ದ ಮಕ್ಕಳ ಶಿಕ್ಷಣದ ಹೊಣೆಹೊತ್ತ ನಟ ವಿಶಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪು ಓದಿಸುತ್ತಿದ್ದ ಮಕ್ಕಳ ಶಿಕ್ಷಣದ ಹೊಣೆಹೊತ್ತ ನಟ ವಿಶಾಲ್

ಹೈದರಾಬಾದ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ತುಂಬಲಾರದ ನಷ್ಟ. ಪುನೀತ್ ಓದಿಸುತ್ತಿದ್ದ ಮಕ್ಕಳ ಜವಾಬ್ದಾರಿಯನ್ನು ಇನ್ನುಮುಂದೆ ನಾನು ಹೊರುತ್ತೇನೆ ಎಂದು ತಮಿಳು ನಟ ವಿಶಾಲ್ ತಿಳಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಹಠಾತ್ ಸಾವು ಎಲ್ಲರಿಗೂ ಆಘಾತ ತಂದಿದೆ. ಚಿತ್ರರಂಗ ಮಾತ್ರವಲ್ಲ ಸಾಕಷ್ಟು ಸಮಾಜ ಸೇವೆಯನ್ನು ಅಪ್ಪು ಮಾಡಿದ್ದರು. ಪುನೀತ್ ನಮ್ಮನ್ನು ಬಿಟ್ಟು ಎಲ್ಲಿಯೂ ಹೋಗಿಲ್ಲ, ಅವರು ನಮ್ಮ ನಡುವೆಯೇ ಇದ್ದಾರೆ. ಪುನೀತ್ ಆತ್ಮಕ್ಕೆ ಶಾಂತಿ ಸಿಗಬೇಕು. ಹಾಗಾಗಿ ಅವರು ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ನನ್ನದು. ಅವರ ಒಳ್ಳೆಯ ಕೆಲಸಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.

ಪುನೀತ್ ಅವರ ಬದುಕು ಎಲ್ಲರಿಗೂ ಮಾದರಿ. ಒಂದು ಸರ್ಕಾರ ಮಾಡಬೇಕಾದ ಕೆಲಸವನ್ನು ಪುನೀತ್ ಮಾಡುತ್ತಿದ್ದರು. ಹಲವು ಅನಾಥಾಶ್ರಮ, ವೃದ್ಧಾಶ್ರಮ, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು. ಆ ಬಡ ಮಕ್ಕಳ ಶಿಕ್ಷಣ ನಿಲ್ಲಬಾರದು. ಮುಂದಿನ ವರ್ಷದಿಂದ 1800 ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...