alex Certify ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವ ಹಿಂದಿನ ಕಾರಣ ಬಿಚ್ಚಿಟ್ಟ ನಟ ಶ್ರೀಮುರಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವ ಹಿಂದಿನ ಕಾರಣ ಬಿಚ್ಚಿಟ್ಟ ನಟ ಶ್ರೀಮುರಳಿ

ಇಂದು ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ 39ನೇ ಜನ್ಮದಿನವಾಗಿದ್ದು ಅವರ ಬಹುನಿರೀಕ್ಷೆಯ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಲಿದೆ. ಈ ನಡುವೆ ನಟ ಶ್ರೀ ಮುರುಳಿ ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ. ಕೊರೊನಾ ಕಾರಣದಿಂದಾಗಿ ಈ ಬಾರಿ ನನ್ನ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲಾಗುವುದಿಲ್ಲ. ಹಾರ, ಕೇಕ್, ಗಿಫ್ಟ್ ಗಳಿಗೆ ಖರ್ಚು ಮಾಡಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ  ಮಾಡಿದ್ದಾರೆ.

ಅಭಿಮಾನಿಗಳಲ್ಲಿ ಮನವಿ…..ಈ ಬಾರಿ ಹುಟ್ಟುಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲಾಗುವುದಿಲ್ಲ…ಕಾರಣ…covid! ನಮ್ಮಿಂದಾರಿಂದಲು ಬೇರೆ ಯಾರಿಗೂ ಅನಾನುಕೂಲಗಳು ಆಗುವುದು ಬೇಡ. ನಾನು ಕಾರಣಾಂತರಗಳಿಂದ ಮನೆಯಲ್ಲಿ ಇರುವುದಿಲ್ಲ. ಯಾರು ಸಹಿತ ಮನೆ ಹತ್ತಿರ ಬಂದು ಬೇಸರರಾಗಬೇಡಿ. ಯಾವ ಹಾರ, ಕೇಕ್, ಗಿಫ್ಟ್ ಗಳಿಗೆ ಕರ್ಚ್ ಮಾಡಬೇಡಿ. ಬದಲಾಗಿ ಹಸಿವಿರುವವರಿಗೆ ಕೈಯಲ್ಲಿ ಆದಷ್ಟು ಅನ್ನದಾನವನ್ನ ಮಾಡಿ ಎಂದು ಕೋರಿಕೊಳ್ಳುತ್ತೀನಿ.

ನಮ್ಮ ಎಲ್ಲಾ ಸಂಘದ ಚಿನ್ನ’ಗಳಿಗೆ ಈ ಮೂಲಕ ನಾನು ತಿಳಿಸುತ್ತಿದ್ದೀನಿ plz note. ನಿಮ್ಮನ್ನು ನೋಡೋಕಾಗದ ಬೇಸರ ನನಗೂ ಇದೆ. ಹಾಗಾಗಿ ಅಭಿಮಾನಿ ದೇವರೆ ಆದಷ್ಟು ಬೇಗ ಎಲ್ಲವೂ ಸುಧಾರಿಸಿಕೊಂಡ ನಂತರ ಸಿಗೋಣ!ನಿಮ್ಮ ಪ್ರೀತಿ ಅಕ್ಕರೆಯನ್ನು ನಾನು ತಿರಸ್ಕರಿಸುವುದಿಲ್ಲ. ನಿಮ್ಮ ಅಭಿಮಾನ. ಪ್ರೀತಿ, ಆರೈಕೆ ನನಗೆ ಇಂದು, ಎಂದೆಂದು ಬೇಕು, ಅದಕ್ಕೆ ನೀವು ಮಾಡಬೇಕಾಗಿರುವುದೇನೆಂದರೆ, ನೀವು ಇರುವ ಕಡೆಯಿಂದಲೇ ನನ್ನನ್ನು ಹಾರೈಸಿ ಆಶಿರ್ವದಿಸಿ. ಅದೇ ನೀವು ನನಗೆ ಹುಟ್ಟುಹಬ್ಬದಂದು ಕೊಡುವ ಬಹುದೊಡ್ಡ ಕಾಣಿಕೆ. ಇಂತಿ ನಿಮ್ಮ ಪ್ರೀತಿಯ ಶ್ರೀಮುರಳಿ ಎಂದು ಬರೆದುಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...