alex Certify ಉಸಿರಾಟದ ಸಮಸ್ಯೆಯಿಂದ ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಸಿರಾಟದ ಸಮಸ್ಯೆಯಿಂದ ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿರುವ ಕಾರಣ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸಂಜಯ್ ದತ್ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಎಂದು ಹೇಳಲಾಗಿದೆ.

ಈ ಕುರಿತು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಲೀಲಾವತಿ ಆಸ್ಪತ್ರೆ, ಉಸಿರಾಟದ ಸಮಸ್ಯೆ ಇರುವ ಕಾರಣಕ್ಕೆ ಸಂಜಯ್ ದತ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ತಿಳಿಸಿದೆ. ಇಂದು ವೈದ್ಯರು ತಪಾಸಣೆ ನಡೆಸಿದ ಬಳಿಕ ಡಿಸ್ಚಾರ್ಜ್ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಸಂಜಯ್ ದತ್ ಮುಂಬೈನ ತಮ್ಮ ನಿವಾಸದಲ್ಲಿ ಒಂಟಿಯಾಗಿ ವಾಸವಾಗಿದ್ದು, ಅವರ ಪತ್ನಿ ಮಾನ್ಯತಾ ಹಾಗೂ ಮಕ್ಕಳು ವಿದೇಶದಲ್ಲಿ ಇದ್ದಾರೆ. ಕೊರೊನಾ ಲಾಕ್ ಡೌನ್ ಘೋಷಣೆಗೂ ಮುನ್ನ ಸಂಜಯ್ ದತ್ ಕುಟುಂಬ ವಿದೇಶಕ್ಕೆ ತೆರಳಿದ್ದು, ಇದೀಗ ಅಂತಾರಾಷ್ಟ್ರೀಯ ವಿಮಾನ ಸಂಚಾರವಿಲ್ಲದ ಕಾರಣ ಅಲ್ಲಿಯೇ ಇದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...