alex Certify ಕೊರಗಜ್ಜನ ಮುಂದೆ ಕೈ ಮುಗಿದು ನಿಂತ ಡಿ ಬಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರಗಜ್ಜನ ಮುಂದೆ ಕೈ ಮುಗಿದು ನಿಂತ ಡಿ ಬಾಸ್

ಬೆಂಗಳೂರು: ಕೊರೊನಾ ಲಾಕ್ ಡೌನ್ ವೇಳೆ ಸಿನಿಮಾ ಕೆಲಸಗಳು ಸ್ಥಗಿತಗೊಂಡಿದ್ದರಿಂದ ಚಾಲೇಂಜಿಂಗ್ ಸ್ಟಾರ್ ದರ್ಶನ್ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಸ ಮಾಡಿದ್ದರು. ಈ ವೇಳೆ ತುಳುನಾಡಿನ ನಂಬಿಕೆಯ ಪ್ರತೀಕ, ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ಗುಡಿಗೆ ದರ್ಶನ್ ಭೇಟಿ ನೀಡಿದ್ದರು. ಇದೀಗ ಈ ಕುರಿತ ಫೋಟೋಗಳು ಭಾರಿ ವೈರಲ್ ಆಗಿವೆ.

ಹೌದು. ಇತ್ತೀಚೆಗೆ ನಟ ದರ್ಶನ್ ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತನ್ನ ಸ್ನೇಹಿತರ ಜೊತೆಗೂಡಿ, ಕೊರಗಜ್ಜನ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಮುಂದೆ ಕೈಮುಗಿದು ನಿಂತಿರುವ ಡಿ ಬಾಸ್ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುಳುನಾಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿವೆ.

ಕೊರೊನಾ ಲಾಕ್ ಡೌನ್ ವೇಳೆ ಸಿನಿಮಾ ಶೂಟಿಂಗ್ ನಿಂದ ಬಿಡುವು ಪಡೆದುಕೊಂಡಿದ್ದ ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ಸಾಕು ಪ್ರಾಣಿಗಳ ಜೊತೆ ಕಾಲ ಕಳೆದಿದ್ದರು. ಅಲ್ಲದೇ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...