ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಆರ್ಭಟಿಸುತ್ತಿದ್ದು, ಇದಕ್ಕೆ ಈಗಾಗಲೇ 36 ಮಂದಿ ಬಲಿಯಾಗಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಸೋಂಕು ಪೀಡಿತರ ಶುಶ್ರೂಷೆಯಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನಿರಂತರವಾಗಿ ತೊಡಗಿದ್ದು, ಪೊಲೀಸ್, ಹೋಂ ಗಾರ್ಡ್ಸ್ ಮೊದಲಾದವರು ಕೊರೊನಾ ನಿಯಂತ್ರಣಕ್ಕಾಗಿ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇಂತಹ ಮಹತ್ವದ ಕಾರ್ಯದಲ್ಲಿ ತೊಡಗಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸ್, ಹೋಂ ಗಾರ್ಡ್ಸ್ ಮೊದಲಾದವರಿಗೆ ನಟಿ ರಶ್ಮಿಕಾ ಮಂದಣ್ಣ ಕೊಡಗಿನ ವಿರಾಜಪೇಟೆಯಲ್ಲಿರುವ ತಮ್ಮ ಕುಟುಂಬದ ಒಡೆತನದ ಸೆರಿನಿಟಿ ಹಾಲ್ ನಲ್ಲಿ ಪ್ರತಿದಿನ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದಾರೆ.