alex Certify ಚುನಾವಣೆಗೆ ಸ್ಪರ್ಧಿಸ್ತಾರಾ ಅಂಬಿ ಪುತ್ರ ಎಂಬ ಕುತೂಹಲಕ್ಕೆ ಕೊನೆಗೂ ಬಿತ್ತು ತೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಸ್ಪರ್ಧಿಸ್ತಾರಾ ಅಂಬಿ ಪುತ್ರ ಎಂಬ ಕುತೂಹಲಕ್ಕೆ ಕೊನೆಗೂ ಬಿತ್ತು ತೆರೆ

ಅಂಬಿ ಸಾವಿನ ನಂತರ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಜಯ ಸಾಧಿಸಿದರು. ಇದಾದ ನಂತರ ಅಭಿಷೇಕ್ ಅಂಬರೀಶ್ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಸಾಕಷ್ಟು ಬಾರಿ ಕೇಳಿ ಬಂದಿದ್ದವು. ಇದಕ್ಕೆ ಸ್ವತಃ ಅಭಿಷೇಕ್ ಅವರೇ ಸ್ಪಷ್ಟನೆ ನೀಡಿದ್ದಾರೆ.

ಹೌದು, ಇತ್ತೀಚೆಗೆ ಮಂಡ್ಯದ ಗೆಜ್ಜಲಗೆರೆಯಲ್ಲಿ ಬಡವರಿಗೆ ಆಹಾರದ ಕಿಟ್ ನೀಡಿ ಸಹಾಯ ಮಾಡಿದರು. ಇದೇ ವೇಳೆ ಮಾತನಾಡಿದ ಅಭಿಷೇಕ್ ಅಂಬರೀಷ್, ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದಾರೆ. ನಾನು ರಾಜಕೀಯ ಪ್ರವೇಶ ಮಾಡಲ್ಲ. ಸಿನಿಮಾದಲ್ಲಿಯೇ ಮುಂದುವರೆಯಬೇಕು ಅಂತ ನಿರ್ಧಾರ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದು ಸುಳ್ಳು ಎಂದು ಹೇಳಿದ್ದಾರೆ.

ಇನ್ನು ಕೊರೊನಾ ಬಗ್ಗೆ ಮಾತನಾಡಿದ ಅವರು, ಎಲ್ಲರೂ ಮನೆಯಲ್ಲಿದ್ದು ಆರೋಗ್ಯ ಕಾಪಾಡಿಕೊಳ್ಳಿ. ಸಿನಿಮಾ ಬಗ್ಗೆ ಏನಾದರು ಇದ್ದರೆ ನನ್ನನ್ನ ಕೇಳಿ. ರಾಜಕೀಯದ ಬಗ್ಗೆ ಇದ್ದರೆ ತಾಯಿಯನ್ನು ಕೇಳಿ ಎಂದು ಹೇಳುವ ಮೂಲಕ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...